ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಂಭ್ರಮ

ಶ್ರೀಮಠದ ವಿಭೂತಿಯೋಗ ಕೇಂದ್ರದ ಯೋಗಾಚಾರ್ಯರಾದ ಶ್ರೀ ಶ್ರೀನಿವಾಸಮೂರ್ತಿಯವರ ನೇತೃತ್ವದಲ್ಲಿ, ಶ್ರೀಮಠದ ಉಚಿತ ವಸತಿ ಶಾಲೆಯ ವಿದ್ಯಾರ್ಥಿಗಳು, ಶ್ರೀಮಠದ ವ್ಯಾಪ್ತಿಯ ಪ್ರಜಾಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಯೋಗಾಭ್ಯಾಸ ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗ ದಿನವನ್ನು ಸಂಭ್ರಮದಿಂದ ಆಚರಿಸಿದರು.

ಇದೇ ಸಂದರ್ಭದಲ್ಲಿ, ಕೈಲಾಸ-ಮಾನಸ ಸರೋವರ ಯಾತ್ರೆಯಲ್ಲಿರುವ ಪರಮಪೂಜ್ಯ ಶ್ರೀ ಸ್ವಾಮೀಜಿಯವರು, ನೇಪಾಳದ ರಾಜಧಾನಿ ಕಾಠ್ಮಂಡುವಿನ ಭಕ್ತಪುರದಲ್ಲಿರುವ ಶ್ರೀ ಕೇದಾರನಾಥನ ಶಿರವೆಂದು ಪ್ರಸಿದ್ಧವಾದ ಶ್ರೀ ಡೋಲೇಶ್ವರ ಮಹಾದೇವ ದೇವಾಲಯದ ಪವಿತ್ರ ಪರಿಸರದಲ್ಲಿ ಪ್ರಾಣಾಯಾಮ ಹಾಗೂ ಧ್ಯಾನಾಭ್ಯಾಸ ಮಾಡುವುದರ ಮೂಲಕ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದರು.

ಪೂಜ್ಯರ ಮಾರ್ಗದರ್ಶನದಲ್ಲಿ ಶ್ರೀಮಠದ ಉಚಿತ ವಸತಿ ಶಾಲೆಯ ವಿದ್ಯಾರ್ಥಿಗಳು, ಯೋಗಾಚಾರ್ಯ ಶ್ರೀ ಶ್ರೀನಿವಾಸಮೂರ್ತಿಯವರ ನೇತೃತ್ವದಲ್ಲಿ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನಾಭ್ಯಾಸಗಳನ್ನು ನಡೆಸಿ ಯೋಗದ ಮಹತ್ವವನ್ನು ಅರಿತುಕೊಂಡರು.

ಯೋಗವು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯದ ಸಮನ್ವಯಕ್ಕೆ ದಾರಿಯೆಂಬ ಸಂದೇಶವನ್ನು ಈ ವಿಶೇಷ ಆಚರಣೆ ಸಾರಿತು. ಯೋಗಾಭ್ಯಾಸದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಎಲ್ಲರಿಗೂ ಕರೆ ನೀಡಲಾಯಿತು.

Leave a Comment